Surprise Me!

ಸಿದ್ದು ಮೇಲಿನ ಮುನಿಸಿಗೆ ಪಕ್ಷ ತೊರೆಯಲು ಮುಂದಾದ ಮುನಿರತ್ನ? | Oneindia Kannada

2017-11-30 2,766 Dailymotion

ಬೆಂಗಳೂರು, ನವೆಂಬರ್ 30: ಬೆಂಗಳೂರಿನಲ್ಲಿ ಕಾಂಗ್ರೆಸ್ ಮಟ್ಟಿಗೆ ಟ್ರಂಪ್ ಕಾರ್ಡ್ ಎನಿಸಿಕೊಂಡಿರುವ ಪ್ರಮುಖ ಶಾಸಕ ಮುನಿರತ್ನ ಯಾಕೋ ಮುನಿಸಿಕೊಂಡಿದ್ದಾರೆ. ಕಷ್ಟದಲ್ಲಿ ನೆರವಾಗಿ ಬರದಿರುವ ಪಕ್ಷದಲ್ಲಿ ಇದ್ದು ಏನು ಪ್ರಯೋಜನ ಎಂದು ಆಪ್ತರಲ್ಲಿ ಹೇಳಿಕೊಂಡಿದ್ದಾರೆ. ಮುನಿರತ್ನ ಅವರು ಕೈ ಪಕ್ಷ ತೊರೆದು ಜೆಡಿಎಸ್ ಸೇರುತ್ತಿದ್ದಾರೆ ಎಂಬ ಸುದ್ದಿ ಹಬ್ಬಿದೆ.ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರ ಶಾಸಕ, ನಿರ್ಮಾಪಕ ಮುನಿರತ್ನ ನಾಯ್ಡು ಅವರ ವಿರುದ್ಧ ಕ್ಷೇತ್ರದ ಮೂರು ಪಕ್ಷದ ಮೂವರು ಮಹಿಳಾ ಕಾರ್ಪೊರೇಟರ್‌ಗಳು ತಿರುಗಿ ಬಿದ್ದ ಘಟನೆ, ಇದನ್ನು ಬಿಜೆಪಿ ತನ್ನ ಲಾಭಕ್ಕೆ ಪಡೆಯಲು ಯತ್ನಿಸಿದ್ದು ಎಲ್ಲವೂ ಈಗ ಮುಗಿದ ಅಧ್ಯಾಯ. ಆದರೆ, ಈ ಎಲ್ಲಾ ಸಂದರ್ಭಗಳಲ್ಲೂ ಕಾಂಗ್ರೆಸ್ ನ ಇತರೆ ಶಾಸಕರು ಹಾಗೂ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಕ್ಕೆ ನಿಲ್ಲಲಿಲ್ಲ ಎಂಬ ಕೊರಗು ಮುನಿರತ್ನ ಅವರಿಗಿದೆ.2018ರ ವಿಧಾನಸಭಾ ಚುನಾವಣೆಯಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಿಂದಲೇ ಮುನಿರತ್ನ ಅವರು ಕಣಕ್ಕಿಳಿಯುತ್ತಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದ ಟಿಕೆಟ್ ಬಯಸುತ್ತಿಲ್ಲ. ಬದಲಿಗೆ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದಾರೆ. ಕಳೆದ ಚುನಾವಣೆಯಲ್ಲಿ ಮುನಿರತ್ನ ಮೊದಲ ಬಾರಿಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು

MLA Munirathna likely to ditch Congess and join JDS. MLA Munirathna allegedly blaming CM Siddaramaih for not supporting him in the BBMP woman corportors issue. MLA Munirathna will contest from Rajajeshwari nagar constituency with JDS ticket