ಚಿಕ್ಕಮಗಳೂರು, ಜುಲೈ.13: ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿರುವ ಬಜೆಟ್ ಸುಳ್ಳಿನ ಬಜೆಟ್. ಈ ರೀತಿಯ ಬಜೆಟ್ ಮಂಡಿಸುವ ಮೂಲಕ ಸಿಎಂ ಜನರ ಹಾಗೂ ರೈತರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಸಿಎಂ ವಿರುದ್ಧ ಕಿಡಿಕಾರಿದರು. ಚಿಕ್ಕಮಗಳೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಬಜೆಟ್ ನಲ್ಲಿ ಸಿಎಂ ಸಾಲಮನ್ನಾ ಘೋಷಣೆ ಮಾಡಿದ್ದು, ಎಷ್ಟು ಸಾಲ ಮನ್ನಾ ಆಗುತ್ತೆ ಎಂಬ ಸ್ಪಷ್ಟತೆ ಇಲ್ಲ. ಹಾಗಾಗಿ ಸಿಎಂ ಸುಳ್ಳು ಹೇಳಿದ್ದಾರೆ ಎಂದು ದೂರಿದರು.