ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ನೆನ್ನೆಯಷ್ಟೆ ಬಂದಿದ್ದು, ಸಿದ್ಧಾರ್ಥ ಉಸಿರುಗಟ್ಟಿ ಸಾವಿಗೀಡಾದ ಬಗ್ಗೆ ಅದರಲ್ಲಿ ಉಲ್ಲೇಖಿಸಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಕೆಎಂಸಿ ಆಸ್ಪತ್ರೆಯ ಫೊರೆನ್ಸಿಕ್ ತಜ್ಞ ಡಾ. ಪ್ರತೀಕ್ ರಸ್ತೋಗಿ ಹಾಗೂ ವೆನ್ಲಾಕ್ ಆಸ್ಪತ್ರೆಯ ಫೊರೆನ್ಸಿಕ್ ವಿಭಾಗದ ಡಾ.ರಶ್ಮಿ ಅವರು ಪ್ರಾಥಮಿಕ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ಅವರಿಗೆ ಸಲ್ಲಿಸಿದ್ದಾರೆ.